ಯಾರೋ ಒಬ್ಬ ವ್ಯಕ್ತಿ ಬರೆದ ಬರಹ ಇದು, ಹೆಸರು ತಿಳಿದಿಲ್ಲ.. ಒಮ್ಮೆ ಓದಿ
ಒಂದು ಯಾರೋ ಒಬ್ಬ ವ್ಯಕ್ತಿ ಬರೆದ ಬರಹ ಇದು, ಹೆಸರು ತಿಳಿದಿಲ್ಲ.. ಒಮ್ಮೆ ಓದಿ
ಒಂದು ನಿಮಷ ಓದಿ ಫ್ರೆಂಡ್ಸ್ *ಹೋಟೆಲ್ ಮಾಲಿಕ ಎಲೆಯಿಟ್ಟು ಊಟ ಬಡಿಸಲು ಬಗ್ಗುತಿದ್ದಂತೆ ಆ ವ್ಯಕ್ತಿ ಕೇಳಿದರು.*ಊಟಕ್ಕೆ ಎಷ್ಟಾಗುತ್ತದೆ?* ಮಾಲಿಕ ಉತ್ತರಿಸಿದರು..*ಮೀನು ಬೇಕಿದ್ದರೆ 50 ರೂಪಾಯಿ, ಮೀನು ಬೇಡವಾದರೆ 20 ರೂಪಾಯಿ....*
*ಆ ವ್ಯಕ್ತಿ ತನ್ನ ಹರಿದ ಅಂಗಿಯ ಕಿಸೆಯಿಂದ ತೆಗೆದ ಹತ್ತು ರೂಪಾಯಿ ಯನ್ನು ಮಾಲಿಕನತ್ತ ಚಾಚುತ್ತಾ...*
*ನನ್ನ ಕೈಯಲ್ಲಿ ಇದುವೇ ಇರೋದು..*
*ಇದಕ್ಕೆ ಸಿಕ್ಕುವುದು ಕೊಟ್ಟರೆ ಸಾಕು.... ಬರೀ ಅನ್ನವಾದರೂ ಸಾಕು..*
*ಹಸಿವು ನೀಗಿದರೆ ಸಾಕು..*
*ನಿನ್ನೆ ಮಧ್ಯಾಹ್ನದಿಂದ ಏನೂ ತಿಂದಿಲ್ಲ....*
*ಅದು ಹೇಳಬೇಕಾದರೆ ಅವರ ಮಾತುಗಳು ತಡವರಿಸಿದವು....*
*ಹೋಟೆಲ್ ಮಾಲಿಕ ಮೀನು ಬಿಟ್ಟು ಬಾಕಿ ಎಲ್ಲಾ ಅವರಿಗೆ ಬಡಿಸಿದರು....*
*ನಾನು ಅವರು ಊಟ ಮಾಡುವುದನ್ನೇ ನೋಡಿ ನಿಂತೆ... ಅವರ ಕಣ್ಣಿನಿಂದ ಕಣ್ಣೀರು ಸಣ್ಣದಾಗಿ ಕೆಳ ಜಾರುತಿತ್ತು.ಅದನ್ನು ಉಜ್ಜಿಕೊಂಡು ಸಣ್ಣ ಮಗುವಿನಂತೆ ನಿಧಾನವಾಗಿ ಊಟಮಾಡುವುದನ್ನ ಕಂಡ ಪಕ್ಕದಲ್ಲಿ ಕುಳಿತ ವ್ಯಕ್ತಿ ಕೇಳಿದರು...*
*ನೀವ್ಯಾಕೆ ಅಳುತಿದ್ದೀರಾ?*
*ಅವರು ಕೇಳಿದ ವ್ಯಕ್ತಿಯ ಮುಖವನ್ನ ನೋಡಿ ಕಣ್ಣನ್ನು ಉಜ್ಜಿಕೊಂಡು ಹೇಳಿದರು....*
*ನನ್ನ ಕಳೆದು ಹೋದ ಜೀವನವನ್ನು ನೆನೆದು ಕಣ್ಣೀರು ಬಂತು.. ಮೂರು ಮಕ್ಕಳು ನನಗೆ ಎರಡು ಗಂಡು, ಒಂದು ಹೆಣ್ಣು...*
*ಮೂರು ಜನರಿಗೂ ಒಳ್ಳೆಯ ಕೆಲಸವಿದೆ... ನನಗೆ ಸಿಕ್ಕಿದ ಎಲ್ಲಾ ಸೌಭಾಗ್ಯ ವನ್ನು ನಾನು ಅವರಿಗೆ ನೀಡಿದೆ.... ಅದಕ್ಕಾಗಿ ನಾನು ಕಳೆದು ಕೊಂಡದ್ದು ನನ್ನ ಯೌವನ ವನ್ನು.... ಇಪ್ಪತ್ತೆಂಟು ವರುಷದ ಪ್ರವಾಸ ಜೀವನ.....*
*ಎಲ್ಲದಕ್ಕೂ ನನ್ನ ಬೆನ್ನೆಲುಬಾಗಿದ್ದ ಅವಳು ಮೊದಲೇ ನನ್ನನ್ನು ಒಂಟಿಯಾಗಿಸಿ ಹೊರಟು ಹೋದಳು.... ಆಸ್ತಿ ಪಾಲು ಮಾಡುವ ಸಂಧರ್ಭ ಎದುರಾಯಿತು ನನ್ನ ಮಕ್ಕಳು, ಸೊಸೆಯಂದಿರಿಗೆ. ಪಾಲು ಮಾಡುತಿದ್ದಂತೆ ನಾನು ಅವರಿಗೆ ಭಾರವಾಗತೊಡಗಿದೆ.... ಮುಟ್ಟಿದ್ದಕ್ಕೆಲ್ಲಾ ನನ್ನನ್ನು ದೂರಲಾರಂಭಿಸಿದರು... ನಾನು ಒಬ್ಬ ಮುದುಕನಲ್ವಾ? ಆ ಒಂದು ಪರಿಗಣನೆಯಾದರು ಕೊಡಬಹುದಿತ್ತಲ್ಲಾ? ಅದೂ ಇಲ್ಲ... ಅವರ ಅಹಾರ ಸೇವನೆಯ ನಂತರವೇ ನಾನು ಕುಳಿತುಕೊಳ್ಳುತಿದ್ದೆ. ಆದರೂ ಬಯ್ಯುತಿದ್ದರು.. ಆಹಾರವೆಲ್ಲಾ ಕಣ್ಣೀರು ಬಿದ್ದು* *ಉಪ್ಪುರಸವಾಗುತಿತ್ತು ತಿನ್ನುವಾಗ..ಮೊಮ್ಮಕ್ಕಳು ಕೂಡಾ ನನ್ನಲ್ಲಿ ಮಾತಾಡುತ್ತಿ ರಲಿಲ್ಲ... ಕಾರಣ ಮಾತನಾಡುವುದ ಕಂಡರೆ ಮಕ್ಕಳು ಅವರನ್ನು ಬಯ್ಯುತಿದ್ದರು... ಯಾವಾಗಲು ಅವರದು ಒಂದೇ ಮಾತು ಎಲ್ಲಿಗಾದರು ಹೊರಟು* *ಹೋಗಬಾರದೇ ಎಂದು...ಈ ಕಲ್ಲು ಭೂಮಿಯಲ್ಲಿ ರಾತ್ರಿ ಹಗಲು ಎನ್ನದೆ ಬೆವರು ಸುರಿಸಿ ದುಡಿದು ಉಂಟುಮಾಡಿದ ಹಣದಲ್ಲಿ , ತಿನ್ನದೆಯೂ ಮಲಗದೆಯೂ ನಾನೂ ಅವಳೂ ಕೂಡಿ ಇಟ್ಟ* *ಹಣದಲ್ಲಿ ಕಟ್ಟಿದ ಈ ಮನೆ... ಅವಳ ನೆನಪುಗಳು ಮಲಗಿರೋದು ಆ ಮನೆಯಲ್ಲಿಯೇ. ಆ ಮನೆ ಬಿಟ್ಟು ಹೋಗಲು ಮನಸ್ಸು ಕೇಳಲಿಲ್ಲ.*
*ಅದರೇ ಏನು ಮಾಡಲಿ ನಿನ್ನೆ ಹೊರಟು ಬಿಟ್ಟೆ... ಸೊಸೆಯ ಒಡವೆ ಕದ್ದೆ ಎಂದು ಕಳ್ಳನ ಪಟ್ಟ ಕಟ್ಟಿ ಮಗ ನನ್ನಲ್ಲಿ ಸಿಟ್ಟುಗೊಂಡ. ಆದರೆ ಹೊಡೆದಿಲ್ಲ ಅದೇ ನನ್ನ ಭಾಗ್ಯ. ... ಇನ್ನೂ ಮತ್ತೆ ಅಲ್ಲಿ ನಿಂತರೆ ಅದೂ ನಡೆಯಬಹುದು.. "ಅಪ್ಪನಿಗೆ* *ಹೊಡೆದ ಮಗ" ಎಂಬ ಹೆಸರು ಬರಬಾರದಲ್ಲ.,.. ನನಗೆ ಸಾಯಲು ಭಯವಿಲ್ಲ ಅಲ್ಲದೆ ಇನ್ನು ನಾನು ಯಾರಿಗಾಗಿ ಬದುಕಬೇಕು.*
*ಅವರು ಪೂರ್ತಿ ಊಟ ಮಾಡದೆ ಎದ್ದರು.. ತನ್ನಲ್ಲಿರುವ ಹತ್ತು ರೂಪಾಯಿ ಮಾಲಿಕರೆಡೆಗೆ ಚಾಚಿದರು.. ಮಾಲಿಕರೆಂದರು ಬೇಡ ಕೈಯಲ್ಲಿ ಇರಲಿ....*
*ಯಾವಾಗ ಬೇಕಿದ್ದರು ನೀವು ಇಲ್ಲಿಗೆ ಬರಬಹುದು...*
*ನಿಮಗಿರುವ ಊಟ ಇಲ್ಲಿ ಇರುತ್ತದೆ.*
*ಆದರೆ ಆ ವ್ಯಕ್ತಿ ಆ ಹತ್ತು ರೂಪಾಯಿ ಅಲ್ಲಿ ಇಟ್ಟು ಹೇಳಿದರು*
*ತುಂಬಾ ಸಂತೋಷವಾಯಿತು ನಿಮ್ಮ ಉಪಕಾರಕ್ಕೆ.. . ಏನೂ ತಿಳಿಯದಿರಿ..ಸ್ವಾಭಿಮಾನ ನನ್ನನ್ನು ಬಿಡುತ್ತಿಲ್ಲ.*
*ಬರ್ತೀನಿ ಇನ್ನೊಮ್ಮೆ ಕಾಣುವಾ ಎಂದು ಅವರ ಗಂಟನ್ನು ಎತ್ತಿಕೊಂಡು ಎಲ್ಲಿಗೆಂದಿಲ್ಲದೆ ಅವರಷ್ಟಕೆ ನಡೆದು ಹೋದರು...*
*ಆ ವ್ಯಕ್ತಿ ನನ್ನ ಮನಸಿಗೆ ಉಂಟು ಮಾಡಿದ ಆ ಗಾಯ ಈಗಲೂ ಒಣಗಲಿಲ್ಲ.*
*ಅದ್ಯಾಕೆ ಎಲ್ಲಾ ಹಸುರು ಎಲೆಗಳೂ ಒಂದು ದಿನ ಹಣ್ಣೆಲೆಯಾಗುತ್ತೆಂದು ಯಾರು ಚಿಂತಿಸುತ್ತಿಲ್ಲ.???*
*ಬೇಡದ್ದು ,ಬೇಕಾದದ್ದು ಕಳುಹಿಸಿ MB ಮುಗಿಸುವಾಗಲೂಇಂತಹ ಒಂದು ಕೂಡಾ ಷೇರು ಮಾಡಿ. ಯಾರಾದರು ಒಬ್ಬರ ಮನಸು ಬದಲಾದರೆ.....*
*ಸಾಕು*
*ಬದಲಾವಣೆ ನಮ್ಮಿಂದಲೇ ಆಗಲಿ* ಶೇರ್ ಮಾಡಿ ಫ್ರೆಂಡ್ಸ್
No comments:
Post a Comment