Tuesday, September 6, 2022

 *ನಿಮ್ಮ ಆಲೋಚನಾ ಶಕ್ತಿಯೇ ನಿಮ್ಮ ಸಂಪತ್ತು*

 (ಮಹಾರಾಷ್ಟ್ರದ ಜಿಲ್ಲಾಧಿಕಾರಿ ಒಬ್ಬರ ಸತ್ಯ ಘಟನೆ)


ಒಂದು ಶಾಲೆಯಲ್ಲಿ ದಿನದ ಪಾಠಗಳು ನೆಡೆಯುತ್ತಿತ್ತು ಎಂದಿನಂತೆ.......ಹೊರಗೆ ಜೋರಾಗಿ ಮಳೆ ಬರುತ್ತಿತ್ತು,....4ನೇ ತರಗತಿಯಲ್ಲಿ ಪಾಠದ ಮದ್ಯ ಶಿಕ್ಷಕರೊಬ್ಬರು ತಮಾಷೆಗೆ ಮಕ್ಕಳನ್ನು ಕೇಳಿದರು - ನಿಮ್ಮೆಲ್ಲರಿಗೂ ನಾನು 100-100 ರೂಪಾಯಿ ಕೊಟ್ಟರೆ ನೀವೆಲ್ಲರೂ ಏನು ಖರೀದಿಸುತ್ತೀರಿ?


 ಒಬ್ಬ ವಿದ್ಯಾರ್ಥಿ ಹೇಳಿದ - ನಾನು ವಿಡಿಯೋ ಗೇಮ್‌ ಖರೀದಿಸುತ್ತೇನೆ..

ಇನ್ನೊಬ್ಬ ಹೇಳಿದ - ನಾನು ಕ್ರಿಕೆಟ್ ಬಾಲ್ ಖರೀದಿಸುತ್ತೇನೆ.

ಮತ್ತೊಬ್ಬ ಹೇಳಿದ- ನಾನು ಒಂದು ಮುದ್ದಾದ ಗೊಂಬೆಯನ್ನು ಖರೀದಿಸುತ್ತೇನೆ.

ಬೇರೆಯೊಬ್ಬ ಹೇಳಿದ - ನಾನು ಚಾಕೊಲೇಟ್ಗಳನ್ನು ಖರೀದಿಸುತ್ತೇನೆ.


...ಆದರೆ..

 

ಒಂದು ಮಗು ಆಲೋಚನೆಯಲ್ಲಿ ಮುಳುಗಿತ್ತು....ಅದನ್ನು ಗಮನಿಸಿದ ಶಿಕ್ಷಕರು ಆ ಹುಡುಗನನ್ನು ಕೇಳಿದರು - ನೀನು ಏನು ಯೋಚಿಸುತ್ತಿದ್ದೀಯ ಮರಿ, ನೀನು ಏನು ಖರೀದಿಸುತ್ತೀಯಾ?


ಆ ಮಗು ಹೇಳಿತು - ಕನ್ನಡಕ ಖರೀದಿಸುವೇ!!

ಶಿಕ್ಷಕ-:ಕನ್ನಡಕನ....ಯಾಕೆ ನಿನಗೆ ಅದು?


ಆ ಹುಡುಗ ಹೇಳಿದ.....ಸಾರ್, ನನ್ನ ತಾಯಿಗೆ ಸ್ವಲ್ಪ ದೃಷ್ಟಿ ಮಂಜು, ಸರಿಯಾಗಿ ಕಣ್ಣು ಕಾಣಿಸುವುದಿಲ್ಲ...ಆದ್ದರಿಂದ ನಾನು ನನ್ನ ತಾಯಿಗೆ ಕನ್ನಡಕವನ್ನು ಖರೀದಿಸುತ್ತೇನೆ!


 ಶಿಕ್ಷಕರು ಕೇಳಿದರು - ನಿನ್ನ ತಂದೆ ನಿನ್ನ ತಾಯಿಗೆ ಕನ್ನಡಕವನ್ನು ತಂದು ಕೊಡಬಹುದು..ಅವರತ್ರ ಹೇಳು... ನೀನು ನಿನಗಾಗಿ ಏನನ್ನಾದರೂ ಖರೀದಿಸಬೇಕಲ್ಲವೇ ಈ 100 ರೂಪಾಯಿಯಲ್ಲಿ?


 ಮಗು ನೀಡಿದ ಉತ್ತರದಿಂದ ಶಿಕ್ಷಕರ ಕಣ್ಣು ತುಂಬಿಬಂತು..


 ಮಗು ಹೇಳಿತು - ನನ್ನ ತಂದೆ ಈಗ ಈ ಜಗತ್ತಿನಲ್ಲಿಲ್ಲ

 ನನ್ನ ತಾಯಿಯೇ ನನಗೆ ಎಲ್ಲ.....ನನ್ನ ತಾಯಿ ಊರ ಜನರ ಬಟ್ಟೆ ಹೊಲಿದು...ಬರುವ ಸಂಪಾದನೆಯಿಂದ..ನನಗೆ ಊಟ.. ನನಗೆ ಬಟ್ಟೆ...ಶಾಲೆಗೆ ಹೋಗಲು ಪುಸ್ತಕ ..ಪೆನ್ನು...ಕೊಡಿಸುತ್ತಾಳೆ....ಕೆಲವು ತಿಂಗಳುಗಳಿಂದ ಅವಳು ದೃಷ್ಟಿ ಹೀನತೆಯಿಂದ ಬಟ್ಟೆಯನ್ನು ಸರಿಯಾಗಿ ಹೊಲಿಯಲು ಪರದಾಡುತ್ತ ಇದ್ದಾಳೆ, ಅದಕ್ಕಾಗಿಯೇ ನಾನು ನನ್ನ ತಾಯಿಗೆ ಕನ್ನಡಕವನ್ನು ನೀಡುತ್ತೇನೆ....ಯಾಕ್ ಅಂದ್ರೆ...ನಾನು ಕೊಡಿಸುವ ಕನ್ನಡಕದಿಂದ.... ನನ್ನ ತಾಯಿ... ನನ್ನನು ಚೆನ್ನಾಗಿ ಓದಿಸುತ್ತಾಳೇ ಅನ್ನೋ ನಂಬಿಕೆಯಿಂದ...ಮತ್ತು...ನನ್ನ ತಾಯಿಯ ಸಹಾಯದಿಂದ....ನಾನು ಭವಿಷ್ಯದಲ್ಲಿ ದೊಡ್ಡ ವ್ಯಕ್ತಿ ಆದ್ರೂ ಆಗಬಹುದು.


 ಶಿಕ್ಷಕ -ಶಭಾಷ್ ಪುಟ್ಟ....ನಿನ್ನ ಆಲೋಚನೆಯೇ ನಿನ್ನ ಸಂಪಾದನೆ! ತಗೋ ಈ 100 ರೂ. ನಾನು ಕೊಟ್ಟ ಭರವಸೆಯ ಮಾತಿನಂತೆ ಮತ್ತು ನಾನು ಇನ್ನೂ ಈ 200 ರೂ.ಗಳನ್ನು ಸಾಲವಾಗಿ ನೀಡುತ್ತಿದ್ದೇನೆ. ನೀನು ದೊಡ್ಡ ವ್ಯಕ್ತಿಯಾಗಿ ಹಣ ಗಳಿಸಿದಾಗ ,ಆ 200 ರೂಗಳನ್ನು ಹಿಂತಿರುಗಿಸು....ನೀನು ಅಂತಹ ದೊಡ್ಡ ಮನುಷ್ಯನಾಗಬೇಕೆಂದು ನಾನು ಬಯಸುತ್ತೇನೆ...ಎನ್ನುತ್ತಾ....ಆ ವಿದ್ಯಾರ್ಥಿಯ ತಲೆಯ ಮೇಲೆ ಕೈಯನ್ನು ಇಟ್ಟು ಆಶೀರ್ವದಿಸಿಸುತ್ತ 300 ಕೊಟ್ಟರು.


30 ವರ್ಷಗಳ ನಂತರ...........


 ಹೊರಗೆ ಮಳೆ ಬರುತ್ತಿದೆ, ಒಳಗೆ ತರಗತಿ ನಡೆಯುತ್ತಿದೆ!...ಅದೇ ಶಿಕ್ಷಕರು ಇನ್ನು ತನ್ನ ನಿವೃತ್ತಿಯ ಕಡೆಯ 3 ತಿಂಗಳು ಎದುರು ನೋಡುತ್ತ...ಯೋಚಿಸುತ್ತ...ಪಾಠ ಮಾಡುತ್ತಿದ್ದರು


 ಏಕಾಏಕಿ ಶಾಲೆಯ ಮುಂದೆ ಜಿಲ್ಲಾಧಿಕಾರಿಗಳ ಕೆಂಪು ಬಣ್ಣದ ದೀಪದ ಸೈರನ್ ಬತ್ತಿಯ ವಾಹನ ಬಂದು ನಿಂತಿತ್ತು..... ಶಾಲಾ ಸಿಬ್ಬಂದಿ ಅಲರ್ಟ್ ಆದರು....


 ಶಾಲೆಯಲ್ಲಿ ಮೌನ!

ಆದರೆ ಇದು ಏನು?


 ಜಿಲ್ಲಾಧಿಕಾರಿಯೊಬ್ಬರು ಮುದುಕ ಶಿಕ್ಷಕರ ಕಾಲಿಗೆ ಬಿದ್ದು ಹೇಳುತ್ತಾರೆ - ಸಾರ್, ನಾನು ಸಾಲವಾಗಿ ಪಡೆದ 200 ರೂಪಾಯಿಗಳನ್ನು ಹಿಂದಿರುಗಿಸಲು ಬಂದಿದ್ದೇನೆ!


 ಇಡೀ ಶಾಲೆಯ ಸಿಬ್ಬಂದಿ ಬೆಚ್ಚಿಬಿದ್ದರು!


 ಆ ವಯಸ್ಸಾದ ಶಿಕ್ಷಕ...ಕಾಲಿಗೆ ಬೀಳಲು ಬಾಗುತ್ತಿರುವ ಆ ಯುವಕನ್ನು ಗುರುತಿಸಿ ಮೇಲೆ ಎತ್ತುತ್ತಾನೆ,ಅಪ್ಪಿಕೊಂಡು ತೋಳುಗಳಲ್ಲಿ ಅಳುತ್ತಾ ಹೇಳುತ್ತಾನೆ....ನನ್ನ ಶಿಕ್ಷಕ ವೃತ್ತಿ ಸಾರ್ಥಕವಾಯಿತು...✍️

 

ಕಾಲ ಬದಲಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ..ಚಕ್ರವರ್ತಿಯ ಮಗ ಫಕೀರನಾಗುತ್ತಾನೆ, ಮತ್ತು ಫಕೀರನ ಮಗ ಚಕ್ರವರ್ತಿಯಾಗುತ್ತಾನೆ.....ಒಳ್ಳೆಯ ಗುರು...ಒಳ್ಳೆಯ ಗುರಿ ಇರಬೇಕು ಅಷ್ಟೇ.......

👏👏👏🙏🏻🙏🏻🙏🏻👍

(ಸಮಾಜಕ್ಕೆ ಉತ್ತಮ ಸಂದೇಶದ ಸತ್ಯ ಘಟನೆ. ಸಾದ್ಯವಾದರೆ ಶೇರ್ ಮಾಡಿ ಪ್ರೋತ್ಸಾಹ ನೀಡಿ).

No comments:

Post a Comment

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು