ಕಥೆ-199 - ರಾಷ್ಟ್ರೀಯ ಏಕತಾ ದಿನ
*ಬ್ರಿಟಿಷರ ನಿದ್ದೆಗೆಡಿಸಿದ್ದ 'ಉಕ್ಕಿನ ಮನುಷ್ಯ' - ಸರ್ಧಾರ್ ವಲ್ಲಭಬಾಯಿ ಪಟೇಲ್*
*ಇಂದು ರಾಷ್ಟ್ರೀಯ ಏಕತಾ ದಿನ & ಸರ್ಧಾರ್ ವಲ್ಲಭಬಾಯಿ ಪಟೇಲ್ ಜನ್ಮ ದಿನ*
*ಹಲವಾರು ಮಹಾನುಭಾವರ ತ್ಯಾಗ ಬಲಿದಾನಗಳ ಮೂಲಕ ಗಳಿಸಿದ ಭಾರತದ ಸ್ವಾತಂತ್ರ್ಯದ ಇತಿಹಾಸ ರೋಚಕವಾದದ್ದು, ದೇಶ ಸ್ವಾತಂತ್ರ್ಯ ಗಳಿಸುವ ನಿಟ್ಟಿನಲ್ಲಿ ಚಳುವಳಿಗೆ ಧುಮುಕಿ ಹೋರಾಟ ನಡೆಸಿದವರು ಅಸಂಖ್ಯಾತ ಮಂದಿ. ಅವರಲ್ಲಿ "ಭಾರತದ ಉಕ್ಕಿನ ಮನುಷ್ಯ" ಎಂದೇ ಕರೆಸಿಕೊಂಡ ವಲ್ಲಭಭಾಯಿ ಪಟೇಲ್ ಕೂಡಾ ಪ್ರಮುಖರು.*
*ಗುಜರಾತ್ನ ನಡಿಯಾಡ್ ಗ್ರಾಮದಲ್ಲಿ ಝವೇರ್ ಭಾಯಿ ಮತ್ತು ಲಾಡ್ಬಾಯಿ ದಂಪತಿಗಳ ಸುಪುತ್ರರಾಗಿ ರೈತರ ಕುಟುಂಬದಲ್ಲಿ ಅಕ್ಟೋಬರ್ 31,1875 ಜನಿಸಿದ ಅವರು, 1917ರಲ್ಲಿ ಗೆಳೆಯರ ಒತ್ತಾಯದ ಮೇರೆಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಅಹಮದಾಬಾದ್ನ ನೈರ್ಮಲ್ಯ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ನಾಗರಿಕ ಸಮಸ್ಯೆಗಳ ಕುರಿತಂತೆ ಬ್ರಿಟಿಷ್ ಅಧಿಕಾರಿಗಳ ಮಧ್ಯೆ ಕೆಲ ಬಾರಿ ವಾಗ್ವಾದ ನಡೆಯುತ್ತಿತ್ತು. ಆದರೆ ವಲ್ಲಭಭಾಯಿಯವರಿಗೆ ರಾಜಕೀಯದಲ್ಲಿ ಇಷ್ಟವಿರಲಿಲ್ಲ. ಚಂಪಾರಣ್ಯದಲ್ಲಿ ಗಾಂಧಿ ನೇತೃತ್ವದಲ್ಲಿ ರೈತರ ಪರವಾಗಿ ಬ್ರಿಟಿಷರ ವಿರುದ್ದ ನಡೆಸಿದ ಹೋರಾಟದಲ್ಲಿ ಜಯ ಸಾಧಿಸಿದ ರೀತಿಯನ್ನು ಕಂಡು ಪ್ರಭಾವಿತರಾದ ವಲ್ಲಭಭಾಯಿ ಪಟೇಲ್, ಸ್ವಾತಂತ್ರ್ಯ ಚಳುವಳಿಗೆ ಧುಮುಕುವುದಾಗಿ ಘೋಷಿಸಿದರು.*
*ಪ್ರಪ್ರಥಮ ಬಾರಿಗೆ 1917ರಲ್ಲಿ ಗುಜರಾತ್ನ ಬೋರ್ಸಾದ್ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ವಲ್ಲಭಭಾಯಿ ಪಟೇಲರು, ರಾಷ್ಟ್ರಾದ್ಯಂತ ಗಾಂಧೀಜಿಯವರ 'ಬ್ರಿಟಿಷರೇ ಭಾರತ ಬಿಟ್ಟು ತೊಲಗಿ' ಎಂಬ ಮನವಿಯನ್ನು ಬೆಂಬಲಿಸುವಂತೆ ಕರೆ ನೀಡಿದರು.*
*'ಕರ ನಿರಾಕರಣೆ' ಆಂದೋಲನದ ಅಂಗವಾಗಿ, ಜನರ ಬೆಂಬಲ ಪಡೆದು ಖೇಡಾ ಜಿಲ್ಲೆಯ ಗ್ರಾಮ ಗ್ರಾಮಗಳಿಗೆ ಭೇಟಿ ನೀಡಿ ತೆರಿಗೆ ನೀಡುವುದನ್ನು ತಿರಸ್ಕರಿಸುವಂತೆ ಗ್ರಾಮಸ್ಥರ ಮನವೊಲಿಸುವಲ್ಲಿ ಯಶಸ್ವಿಯಾದರು. ಇದರಿಂದ ಕೆಂಡಾಮಂಡಲವಾದ ಸರಕಾರ ಪೊಲೀಸರನ್ನು ಹಲವು ತಂಡಗಳಾಗಿ ರಚಿಸಿ ಗ್ರಾಮಸ್ಥರ ಸ್ವತ್ತುಗಳನ್ನು ವಶಪಡಿಸಿಕೊಳ್ಳುವಂತೆ ಆದೇಶಿಸಿತು. ಸರಕಾರ ಸಾವಿರಾರು ರೈತರನ್ನು ಬಂಧಿಸಿತು. ಪಟೇಲರ ಹೋರಾಟದ ಪರವಾಗಿ ಬ್ರಿಟಿಷ್ ಸರ್ಕಾರ ವಲ್ಲಭಭಾಯಿ ಪಟೇಲ್ ಅವರೊಂದಿಗೆ ಚರ್ಚಿಸಲು ನಿರ್ಧರಿಸಿ ರೈತರ ಒಂದು ವರ್ಷದ ತೆರಿಗೆಯನ್ನು ರದ್ದುಗೊಳಿಸಿತು. ಈ ಘಟನೆಯಿಂದಾಗಿ ಗುಜರಾತ್ನಾದ್ಯಂತ ವಲ್ಲಭಭಾಯಿ ಪಟೇಲ್ ಹೀರೋ ಆಗಿ ಕಂಗೊಳಿಸಿ ದೇಶದೆಲ್ಲೆಡೆ ಹೆಸರುವಾಸಿಯಾದರು.*
*ಗುಜರಾತಿನ ಜನ ಗೌರವಾರ್ಥ 'ಸರ್ದಾರ್' ಎಂದು ಕರೆಯುತ್ತಿದ್ದರು.*
*ಗಾಂಧೀಜಿಯವರ ಅಸಹಕಾರ ಚಳವಳಿಯನ್ನು ಬೆಂಬಲಿಸಿದ ಪಟೇಲ್ 3 ಲಕ್ಷ ಕಾರ್ಯಕರ್ತರ ಪಡೆಯನ್ನು ಸಿದ್ಧಗೊಳಿಸಿ 1.5 ಮಿಲಿಯನ್ ಹಣವನ್ನು ಸಂಗ್ರಹಿಸಿದರು. ವಿದೇಶಿ ವಸ್ತುಗಳನ್ನು ತ್ಯಜಿಸುವಂತೆ ಕರೆ ನೀಡಿ ತಾವು ಸ್ವತಃ ಖಾದಿ ಬಟ್ಟೆಗೆ ಮಾರು ಹೋದರು.*
*1923ರಲ್ಲಿ ಗಾಂಧೀಜಿಯವರು ಕಾರಾಗೃಹದಲ್ಲಿದ್ದಾಗ ನಾಗ್ಪುರದಲ್ಲಿ ನಡೆಯುವ ಸತ್ಯಾಗ್ರಹದ ಮುಖಂಡತ್ವವನ್ನು ವಹಿಸುವಂತೆ ಸದಸ್ಯರು ಮನವಿ ಮಾಡಿದರು. ಸಾವಿರಾರು ಬೆಂಬಲಿಗರ ಪಡೆಯನ್ನು ರಚಿಸಿ ಹೋರಾಟಕ್ಕಿಳಿದ ವಲ್ಲಭಭಾಯಿ ಪಟೇಲ್ ಬ್ರಿಟಿಷರ ನಿದ್ದೆಗೆಡಿಸಿದರು.*
*1937ರಲ್ಲಿ ಸರ್ದಾರ ವಲ್ಲಭಭಾಯಿ ಪಟೇಲ್ರನ್ನು ಸಂಸದೀಯ ಉಪಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.*
*1942ರ ಅಗಸ್ಟ್ 8 ರಂದು 'ಕ್ವಿಟ್ ಇಂಡಿಯಾ' ಮಸೂದೆಯನ್ನು ಜಾರಿಗೊಳಿಸಲಾಯಿತು. ಈ ಹೋರಾಟದಲ್ಲಿ ಬ್ರಿಟನ್ ಸರಕಾರವು ಸರ್ದಾರ್ ಪಟೇಲ್, ಜವಾಹರ್ ಲಾಲ್ ನೆಹರು, ಗಾಂಧೀಜಿ ಮತ್ತಿತರ ನಾಯಕರನ್ನು ಬಂಧಿಸಿತು.*
*1946ರ ಮಾರ್ಚ್ 23ರಂದು ಬ್ರಿಟನ್ನ ಪ್ರಧಾನ ಮಂತ್ರಿ ಭಾರತಕ್ಕೆ ಭೇಟಿ ನೀಡಿ ಭಾರತಕ್ಕೆ ಸ್ವಾತಂತ್ರ್ಯ ನೀಡುವ ಭರವಸೆಯನ್ನು ನೀಡಿದರು.*
*ಅಗಸ್ಟ್ 15, 1947 ರಂದು ಭಾರತಕ್ಕೆ ಸಂಪೂರ್ಣ ಸ್ವಾತಂತ್ರ್ಯ ದೊರೆಯಿತು.*
*ಜವಾಹರಲಾಲ್ ನೆಹರು ಪ್ರಧಾನ ಮಂತ್ರಿಯಾಗಿ ಆಯ್ಕೆಯಾದಾಗ ಸರ್ದಾರ್ ಪಟೇಲ್ ಗೃಹ ಹಾಗೂ ವಾರ್ತಾ - ಮಾಹಿತಿ ಖಾತೆಯನ್ನು ಸಮರ್ಥವಾಗಿ ಯಶಸ್ವಿಯಾಗಿ ನಿಭಾಯಿಸಿದರು. ಕೋಮುವಾದಿಗಳು ಹಾಗೂ ದೇಶದ್ರೋಹಿಗಳು ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿದಾಗ ನಿರ್ದಾಕ್ಷಿಣ್ಯವಾಗಿ ಬಂಧಿಸಿ ಸೆರೆಮನೆಗೆ ಅಟ್ಟಿದರು. ಹತ್ತು ಸಾವಿರ ಸಂಖ್ಯೆಯಲ್ಲಿರುವ ಮುಸ್ಲಿಮರು ದೆಹಲಿಯ ಕೆಂಪು ಕೋಟೆಗೆ ಮುತ್ತಿಗೆ ಹಾಕಿದಾಗ ಸೇನೆಯನ್ನು ಬಳಸಿ ದೊಂಬಿಯನ್ನು ಹತ್ತಿಕ್ಕಿದರು. ಭಾರತ ಗಣರಾಜ್ಯಕ್ಕೆ ಸೇರ್ಪಡೆಯಾಗಲು ಹೈದ್ರಾಬಾದ್ ನಿಜಾಮ ನಿರಾಕರಿಸಿದ ಹಿನ್ನೆಲೆಯಲ್ಲಿ ಹೈದ್ರಾಬಾದ್ಗೆ ಸೇನೆಯನ್ನು ನುಗ್ಗಿಸಿ ಒಂದೇ ರಾತ್ರಿಯಲ್ಲಿ ಯಾವುದೇ ಹಿಂಸಾಚಾರವಿಲ್ಲದೇ ನಿಜಾಮರು ಶರಣಾಗುವಂತೆ ಮಾಡುವಲ್ಲಿ ಯಶಸ್ವಿಯಾಗಿ ನಮ್ಮ ಭಾಗದ ಏಳು ಜಿಲ್ಲೆಗಳಿಗೆ ಮತ್ತು ಹೈದರಾಬಾದ್ ಭಾಗದ ಜನತೆಗೆ ಸ್ವಾತಂತ್ರ್ಯವನ್ನು ಕೊಡಿಸಿದರು*
*ಸರ್ದಾರ್ ಪಟೇಲ್ರ ಶ್ರಮ ಹಾಗೂ ದೂರದೃಷ್ಟಿ ಬಲಿಷ್ಠವಾಗಿತ್ತು*
*ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಭಾರತೀಯ ಅಡಳಿತಾತ್ಮಕ ಸೇವೆ(IAS) ಹಾಗೂ ಭಾರತೀಯ ಪೊಲೀಸ್ ಸೇವೆ(IPS) ಮತ್ತು ಕೇಂದ್ರ ಸೇವೆಗಳನ್ನು (ICS) ಆರಂಭಿಸಿ ಉಕ್ಕಿನ ಮನುಷ್ಯರೆಂದು ಖ್ಯಾತಿಪಡೆದ ಸರ್ದಾರ್ ವಲ್ಲಭಭಾಯಿ ಪಟೇಲರು 1950ರಲ್ಲಿ ನಿಧನ ಹೊಂದಿದರು. ಆದರೆ ಅವರ ಧೈರ್ಯ ಸಾಹಸಗಳು ಜನಮಾನಸದಲ್ಲಿ ಇನ್ನೂ ಚಿರಸ್ಥಾಯಿಯಾಗಿ ಉಳಿದಿವೆ*
*ಭಾರತದಲ್ಲಿದ್ದ ಪುಟ್ಟ ಪುಟ್ಟ ರಾಜರಿಂದಾಳಲ್ಪಟ್ಟ ರಾಜ್ಯಗಳನ್ನು ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಇವರು 'ಉಕ್ಕಿನ ಮನುಷ್ಯ' ರೆಂದೇ ಅಮರರಾದರು.*
*ಸರ್ದಾರ್ ಪಟೇಲರಿಗೆ ೧೯೯೧ ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು*
*ಭಾರತದಲ್ಲಿ 565 ರಾಜ ಸಂಸ್ಥಾನಗಳನ್ನು ವಿಲೀನಗೊಳಿಸಿ ಒಂದುಗೂಡಿಸಿ, ಭಾರತದ ಏಕತೆಗಾಗಿ ಶ್ರಮಿಸಿದ ನಮ್ಮ ದೇಶದ ಹೆಮ್ಮೆಯ ಪುತ್ರನ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವಾಗಿ ಆಚರಿಸಲಾಗುತ್ತಿದೆ*
*ನರ್ಮದಾ ನದಿಯ ದಡದಲ್ಲಿ ಸರ್ದಾರ ಪಟೇಲ್ ಅವರ ಏಕತಾ ಪ್ರತಿಮೆ ವಿಶ್ವದ ಅತಿ ಎತ್ತರದ ಪ್ರತಿಮೆಯಾಗಿದೆ.*
*ಅವರಲ್ಲಿದ್ದ ಬದ್ಧತೆ, ಧೈರ್ಯ, ಸಮಾನತೆ ಮತ್ತು ಒಳ್ಳೆಯ ಕೆಲಸಕ್ಕೆ ಕಠಿಣ ನಿರ್ಧಾರಗಳು (ಕಬ್ಬಿಣದ ನಿರ್ಣಯ) ನಮಗೂ ಅನುಕರಣೆಯ*
*ನಂಬಿಕೆಯಿಲ್ಲದ ಶಕ್ತಿ ಅಪ್ರಯೋಜಕವಾದದ್ದು. ಯಾವುದೇ ಕೆಲಸ ಸಾಧಿಸಲು ನಂಬಿಕೆ ಮತ್ತು ಶಕ್ತಿ ಎರಡೂ ಆವಶ್ಯ*
✍ *ಸರ್ಧಾರ್ ವಲ್ಲಭಬಾಯಿ ಪಟೇಲ್*
🙏🙏🙏💐💐💐
No comments:
Post a Comment