Monday, April 8, 2024

 ಕಥೆ-360

ಪವಿತ್ರ ಕಾರ್ಯದಲ್ಲಿ ಅಡಗಿದೆ ನಮ್ಮ ಪಾವನ!

ಮೊದಲನೆಯವನು ಸ್ಯಾಮ್, ಎರಡನೆಯವನು ಜಾನ್ ಹಾಗೂ ಮೂರನೆಯವನು ಎರಿಕ್. ಈ ಮೂವರೂ ರಾಲ್ಫ್ ಎಂಬ ರಾಜನ ಮಕ್ಕಳು. ಇತ್ತ ರಾಲ್ಫ್‌ಗೆ ಮುಪ್ಪು ಆವರಿಸಿದೆ. ಕೈಕಾಲುಗಳು ತ್ರಾಣ ಕಳೆದುಕೊಂಡಿವೆ. ಹಾಸಿಗೆ ಹಿಡಿದಿದ್ದಾನೆ. ಇನ್ನು ಕೆಲವೇ ದಿನಗಳಲ್ಲಿ ಸಾಯಲಿದ್ದಾನೆ. ಆ ಬಗ್ಗೆ ರಾಲ್ಫ್‌ಗೆ ಯಾವ ಅಳುಕೂ ಇಲ್ಲ, ಪಶ್ಚಾತಾಪವಂತೂ ಇಲ್ಲವೇ ಇಲ್ಲ. ಆದರೂ ಆತನ ಮುಖದಲ್ಲಿ ಚಿಂತೆ ಎದ್ದು ಕಾಣುತ್ತಿರುತ್ತದೆ. ಉತ್ತರಾಧಿಕಾರಿಯನ್ನಾಗಿ ಯಾರನ್ನು ನೇಮಕ ಮಾಡಬೇಕೆಂಬ ಪ್ರಶ್ನೆ ಆತನನ್ನು ಕಾಡುತ್ತಿರುತ್ತದೆ. ತನ್ನ ಮೂವರೂ ಮಕ್ಕಳನ್ನು ಬರಮಾಡಿಕೊಂಡ ರಾಲ್ಫ್ ಮಕ್ಕಳೇ ನನಗೆ ಸಾವು ಸಮೀಪಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಸಾಯಲಿದ್ದೇನೆ. ಹಾಗಾಗಿ ನಾನು ಬದುಕಿರುವಾಗಲೇ ಉತ್ತರಾದಿಕಾರಿಯನ್ನು ನೇಮಕ ಮಾಡಬೇಕೆಂಬ ಗೊಂದಲವುಂಟಾಗಿದೆ. ಆದ್ದರಿಂದ ಒಂದು ಪರೀಕ್ಷೆಯನ್ನಿಟ್ಟಿದ್ದೇನೆ. ಅಗೋ ಅಲ್ಲೊಂದು ಕೋಣೆಯಿದೆ. ಯಾವ ವಸ್ತುವೇ ಆಗಿದ್ದರೂ ಅದರಿಂದ ಯಾರು ಆ ಕೋಣೆಯನ್ನು ಮೊದಲು ತುಂಬಿಸುತ್ತಾರೋ ಅವರೇ ಮುಂದಿನ ರಾಜ ಎಂದು ಹೇಳುತ್ತಾನೆ.

ಹೀಗೆ ಹೇಳಿದ ಕೂಡಲೇ ಕಾರ್ಯ ಪ್ರವೃತ್ತನಾದ ಮೊದಲನೆಯ ಮಗ ಸ್ಯಾಮ್, ಅಮೂಲ್ಯವಾದ ವಜ್ರಗಳಿಂದ ಕೋಣೆಯನ್ನು ತುಂಬಿಸಲು ಮುಂದಾಗುತ್ತಾನೆ. ಆದರೆ ಅರ್ಧ ತುಂಬುವಷ್ಟರಲ್ಲಿ ಇದ್ದ ವಜ್ರವೆಲ್ಲ ಬರಿದಾಗುತ್ತದೆ. ಎರಡನೇಯ ಮಗ ಚಿನ್ನವನ್ನು ತಂದು ತುಂಬಿಸುತ್ತಾನೆ. ಆದರೂ ಕೋಣೆ ತುಂಬುವುದಿಲ್ಲ. ಅಣ್ಣಂದಿರಿಬ್ಬರನ್ನೂ ನೋಡುತ್ತಾ ನಿಂತಿದ್ದ ಕೊನೆಯ ಮಗ ಎರಿಕ್, ನಿಧಾನವಾಗಿ ದೀಪವೊಂದನ್ನು ಹಚ್ಚಿ ಕೋಣೆಯ ಮಧ್ಯದಲ್ಲಿಡುತ್ತಾನೆ. ಕತ್ತಲೆ ಮರೆಯಾಗುತ್ತದೆ. ಕೋಣೆಯ ತುಂಬ ಬೆಳಕು ಆವರಿಸುತ್ತದೆ. ಎರಿಕ್ ಉತ್ತರಾದಿಕಾರಿಯಾಗುತ್ತಾನೆ . ವಿದ್ಯೆಯೂ ಕೂಡ ಒಂದು ಬೆಳಕು. ಅಂತಹ ಬೆಳಕನ್ನು ಚೆಲ್ಲುವುದು ಒಂದು ಪವಿತ್ರ ಕಾರ್ಯವೇ ಸರಿ. ಪವಿತ್ರ ಕಾರ್ಯದಲ್ಲಿ ಅಡಗಿದೆ ನಮ್ಮ ಪಾವನ..🙏🙏💐💐💐

No comments:

Post a Comment

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು