Monday, May 13, 2024

 ಕಥೆ 395

ಮಾನವೀಯತೆಯಲ್ಲಿದೆ ಮಾಧುರ್ಯ. 

💐💐💐

ಆತ ಆ ವಯಸ್ಸದ ಮಹಿಳೆಯಿಂದ ಯಾವಾಗಲೂ ಆರೆಂಜ್ ಗಳನ್ನು ಖರೀದಿಸುತ್ತಿದ್ದ. ದುಡ್ಡು ಕೊಟ್ಟು ತೂಕಮಾಡಿದ ಆರೆಂಜ್ ಗಳನ್ನು ಚೀಲದೊಳಗೆ ಹಾಕಿದ ನಂತರ ಅದರಿಂದ ಒಂದನ್ನು ತೆಗೆದು ಸುಲಿದು ಒಂದು ಎಸಳನ್ನು ತಿಂದು ಇದು ಹುಳಿಯಾಗಿದೆ ಅಂತ ಆ ಆರೆಂಜನ್ನು ಆ ಮಹಿಳೆಗೆ ಕೊಡುತ್ತಿದ್ದ. ಆಕೆ ಅದನ್ನು ತಿಂದು ಇದು ಸಿಹಿಯಾಗಿದೆ ಅಲ್ಲಾ ಅನ್ನುವಷ್ಟರಲ್ಲಿ ಆತ ಹೊರಟು ಹೋಗಿರುತ್ತಿದ್ದ.ಇದು ಪ್ರತಿದಿನ ಆವರ್ತಿಸುತ್ತಿದ್ದ.

      ಆತನ ಪತ್ನಿಯು ಕೇಳುತ್ತಾಳೆ - ಆರೆಂಜುಗಳು ಸಿಹಿಯಾಗಿದ್ದರೂ, ನೀವು ಯಾಕೆ ಈತರ ದೂರು ಹೇಳಿ ನಾಟಕ ಮಾಡುತ್ತಿದ್ದೀರಾ?

      ಆತ ನಗುತ್ತಾ ಹೇಳುತ್ತಾನೆ - ಆ ಮಹಿಳೆ ಸಿಹಿಯಾದ ಆರೆಂಜ್ ಗಳನ್ನು ಮಾರುತ್ತಿದ್ದರೂ ಒಂದನ್ನು ಕೂಡಾ ತಿನ್ನುವುದಿಲ್ಲ. ನಾನು ಹೀಗೆ ಮಾಡುವುದರಿಂದ ಆಕೆಗೆ ದುಡ್ಡು ಕೊಡದೆ ಮತ್ತು ನಷ್ಟವಾಗದೆ ಒಂದು ಆರೆಂಜನ್ನು ತಿನ್ನಬಹುದಲ್ಲಾ?.

      ಎಲ್ಲಾ ದಿನವೂ ಆ ಅಂಗಡಿಯ ದೃಶ್ಯವನ್ನು ನೋಡುತ್ತಿದ್ದ ಪಕ್ಕದ ಅಂಗಡಿಯಾಕೆ ಆ ವಯಸ್ಸದ ಮಹಿಳೆಯತ್ರ ಕೇಳುತ್ತಾಳೆ - ಆತ ಪ್ರತಿದಿನ ನಿಮ್ಮ ಆರೆಂಜ್ ಹುಳಿಯಾಗಿದೆ ಅಂತ ದೂರುತ್ತಿದ್ದರೂ ತೂಕದಲ್ಲಿ ಯಾಕೆ ಹೆಚ್ಚು ಕೊಡುತ್ತಿದ್ದೀರಾ?

      ಅದಕ್ಕೆ ಆ ವಯಸ್ಸದ ಮಹಿಳೆ ನಗುತ್ತಾ ಹೇಳುತ್ತಾಳೆ - ನನಗೆ ಗೊತ್ತು ಆತ ಆರೆಂಜ್ ನ್ನು ದೂರುತ್ತಾ ಒಂದು ಆರೆಂಜ್ ನ್ನು ಕೊಡುತ್ತಿರುವುದು ನನಗೆ ತಿನ್ನೋಕೆ ಅಂತ . ಆದರೆ ಆ ವಿಷಯ ನನಗೆ ಗೊತ್ತಿದೆ ಅಂತ ಆತನಿಗೆ ಗೊತ್ತಿಲ್ಲ ....! ಅದರಿಂದಲೇ ತೂಕದಲ್ಲಿ ನಾನು ಒಂದು ಆರೆಂಜನ್ನು ಹೆಚ್ಚಾಗಿ ಕೊಡುತ್ತಿರುವುದು ...!

ಜೀವನದ ಮಾಧುರ್ಯವು ನಾವು ನಮ್ಮ ಸಹಜೀವಿಗಳಲ್ಲಿ ತೋರಿಸುವ ಸ್ನೇಹ ಸೌಹಾರ್ದ, ಗೌರವೀಯತೆ, ದಯನೀಯತೆ, ಮಾನವೀಯತೆ ಎಲ್ಲವೂ ಆಗಿದೆ. ಕೃಪೆ : ಅಂತರ್ಜಾಲ

No comments:

Post a Comment

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು