Sunday, July 28, 2024

 ಕಥೆ-470

ಜೀವಿಸಿರುವಾಗ ನೋಡಿಕೊಳ್ಳುವುದು ನಿಜವಾದ ಬೆಲೆ



ಸುಂದರ ಕಥೆ

ಓದಿ ಮತ್ತೆ ಚಿಂತಿಸಿ ನಾವು

ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಕಥೆ...

ಗಂಡ ಹೆಂಡತಿ ಎರಡು ಮಕ್ಕಳಿರುವ ಕುಟುಂಬ...

ಒಂದು ದಿವಸ ದುಬೈ ಪೆಸ್ಟಿವಲ್ ಗೆ ಸುತ್ತಲು ಹೋದ ಈ ಕುಟುಂಬ

ಗಂಟೆಗಟ್ಟಲೆ ಸುತ್ತಿ ಸಂತೋಷಿಸಿದರು...

ಅದರೆಡೆಯಲ್ಲಿ ಅಲ್ಲಿನ ನೂಕುನುಗ್ಗಲಿಗೆ ಅವರ ಮಗ

ಕಾಣುವುದಿಲ್ಲ...

ಅವರು ಅವನನ್ನು ಹುಡುಕಿ ಹುಡುಕಿ ಸಿಗದಾದಾಗ ಅವನ ತಾಯಿ

ಬೊಬ್ಬೆ ಹಾಕಲು ಶುರುಮಾಡಿದಳು....

ಬೊಬ್ಬೆ ಕೇಳಿ ಸಾರ್ವಜನಿಕರು ಒಟ್ಟು ಗೂಡಿದರು ಪೋಲಿಸರಿಗೆ

ತಿಳಿಸಿದರು

ಪೋಲಿಸರು ಗಂಟೆಗಟ್ಟಲೆ ಹುಡುಕಿ ಹೇಗೋ ಮಗನನ್ನು ಹುಡುಕಿದರು.

ಅವನನ್ನು ತಂದೆ ತಾಯಿಗೆ ಮುಟ್ಟಿಸಿದರು.

ಮಗ ಸಿಕ್ಕಿದ ಕೂಡಲೇ ಹೆಂಡತಿ ಮತ್ತು ಮಕ್ಕಳನ್ನು ಪ್ಲಾಟಿಗೆ

ಕಳುಹಿಸಿ ಗಂಡ ಟ್ರಾವಲ್ಸಿಗೆ ಹೋಗಿ ನಾಲ್ಕು ಟಿಕೆಟ್ ಬುಕ್

ಮಾಡುತ್ತಾರೆ....

ಟಿಕೆಟ್ ಕೈಯಲ್ಲಿ ಸಿಕ್ಕಿದಾಗ ಹೆಂಡತಿ ಆಶ್ಚರ್ಯದಿಂದ

ಕೇಳಿದಳು

ಅಲ್ಲ ರೀ ನಿಮಗೇನಾಗಿದೆ...?

ಊರಿನಲ್ಲಿ ಯಾರಾದರೂ ಮರಣ

ಹೊಂದಿದಾರಾ......?ಅವಸರದಿಂದ ಮನೆಗೆ

ಹೋಗಲಿಕ್ಕೆ....?

ಕೂಡಲೆ ಗಂಡ ಅಳುತ್ತಾ ಹೇಳಿದ

"ಸ್ವಂತ ಮಗ ಎರಡು ಗಂಟೆ ಸಮಯ

ಕಾಣಾದಾದಾಗ ನೀನು ತುಂಬಾ ಬೇಜಾರು ಮಾಡಿಕೊಂಡು ಬೊಬ್ಬೆ ಹೊಡೆದೆಯಲ್ಲ ....?

"" ಹಾಗಾದರೆ ನಾನು ಕಳೆದ ಹತ್ತು ವರ್ಷದಿಂದ ನಿನ್ನ ಮಾತು ಕೇಳಿ ಊರಿಗೆ ಹೋಗದ ಕಾರಣ ನನ್ನನ್ನು ಒಂದು ಸಲ ನೋಡದೆ ನನ್ನ ತಾಯಿ ಎಷ್ಟು ಸರ್ತಿ ಬೇಜಾರು ಮಾಡಿಕೊಂಡಿರಬೇಕು..?

ಅದಕ್ಕೆ ಅವಳ ಪ್ರತಿಕ್ರಿಯೆ ಮೌನವಾಗಿತ್ತು......

ತಂದೆ ತಾಯಿಯ ಮನಸ್ಸಿಗೆ ಘಾಸಿ ಉಂಟು ಮಾಡಿ ಯಾರು

ಅಧಿಕ ಕಾಲ ಸುಖವಾಗಿ ಜೀವಿಸಿಲ್ಲ. ಜೀವಿಸಲು ಸಾಧ್ಯವಿಲ್ಲ..


ತಂದೆ ತಾಯಿಯ ಋಣ ತೀರಿಸಲು ಸಾಧ್ಯವಿಲ್ಲ..

ನಾವು ತಂದೆ ತಾಯಿಯರನ್ನು

ಪ್ರೀತಿಸುವುದಾದರೆ ಬಾಧ್ಯತೆಗಳು ನೆರವೇರಿಸುದಾದರೆ ಅವರು

ಜೀವಿಸಿರುವಾಗ ಮಾಡಿದರೆ ನಮ್ಮ ಜನ್ಮ ಸಾರ್ಥಕ.

ಮರಣ ಹೊಂದಿದಾಗ ಶತ್ರು ಕೂಡ ಅಳುತ್ತಾನೆ.... 

👍

No comments:

Post a Comment

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು