Friday, April 11, 2025

 ಕಥೆ-705

ಕ್ಷಣದ ದುಡುಕು ತಂದೀತು ಕೆಡಕು


ಇತ್ತೀಚೆಗಷ್ಟೇ ನಡೆದ ಎರಡು ಹೃದಯ ವಿದ್ರಾವಕ ಘಟನೆಗಳು 

 ಒಂದು: ಹಸುವಿನ ಕೆಚ್ಚಲು ಕತ್ತರಿಸಿದ ಅಮಾನವೀಯ ಘಟನೆ. 

ಇನ್ನೊಂದು: ಕೌಟುಂಬಿಕ ಕಲಹದ ಕಾರಣ ತಾಯಿ ಹೆತ್ತ ಮಕ್ಕಳನ್ನೇ ಕಾಲುವೆಗೆ ಎಸೆದದ್ದು. ಈ ಎರಡೂ ಘಟನೆಗಳು ಎಂಥವರ ಕರುಳನ್ನೂ ಕರಗಿಸದಿರಲಾರವು. ಇದು ಕ್ರೌರ್ಯದ ಪರಮಾವಧಿ ಎಂದರೂ ತಪ್ಪಾಗದು.

ಈ ಘಟನೆ ಹಿಂದಿನ ಕಾರಣ ಬೆನ್ನತ್ತಿ ಹೊರಟರೆ ಸಿಗುವ ಅಂಶ ಎಂದರೆ ಒಂದು ಮನಸ್ಥಿತಿ, ಇನ್ನೊಂದು ಮನೆ ಸ್ಥಿತಿ. 

ಹೌದು ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣದಲ್ಲಿ ಆ ದುಷ್ಕೃತ್ಯ ಎಸಗಿದ ವ್ಯಕ್ತಿ ಪಾನಮತ್ತನಾಗಿದ್ದ. ಅದರ ಅಮಲಿನಲ್ಲಿ ಮಾಡಿದ. ಇನ್ನೊಂದು ಪ್ರಕರಣದಲ್ಲಿ ಪತಿ ಮನೆಯವರ ಕಡೆಯಿಂದ ಆಗಾಗ್ಗೆ ನಡೆಯುತ್ತಿದ್ದ ಆಸ್ತಿ ವ್ಯಾಜ್ಯ, ಕೌಟುಂಬಿಕ ಕಲಹದಿಂದ ಬೇಸತ್ತು ಸಾವಿಗೆ ಶರಣಾಗುವ ಮನಸ್ಥಿತಿಗೆ ಬಂದ ಆ ಮಹಿಳೆಯ ದುಡುಕಿನ ನಿರ್ಧಾರ. ಮನ ಮತ್ತು ಮನೆ ಎರಡರ ಸ್ವಾಸ್ಥ್ಯಕ್ಕೆ ಧಕ್ಕೆ ಬಂದಾಗ ಆಗುವ ಅನಾಹುತಕ್ಕೆ ಇದಕ್ಕಿಂತ ಬೇರೆ ಉತ್ತಮ ನಿದರ್ಶನವಿಲ್ಲ.


ಹಾಗಾದರೆ ಈ ತರಹ ಯಾಕೆ ಆಗುತ್ತದೆ? ಎಂದರೆ, ಮನುಷ್ಯ ತನ್ನ ಮನಸ್ಸನ್ನು ನಿಯಂತ್ರಿಸುವಲ್ಲಿ ವಿಫಲನಾಗುವುದಕ್ಕೆ ಮತ್ತು ದುಡುಕುವುದಕ್ಕೆ ಒಂದು ಕ್ಷಣದ ಆತುರದ ಎದುರು ಎಲ್ಲವೂ ಸರಿ ತಂಬುವ ನಿರ್ಧಾರ. ಅದು ದೊಡ್ಡ ಅನಾಹುತಗಳಿಗೆ ಕಾರಣವಾಗುತ್ತದೆ. ಈಗ ಆ ಮಕ್ಕಳು ಮರಳಿ ಬಾ ಎಂದರೆ ಬರಲು ಸಾಧ್ಯವೇ? ಸಮಾಜದಲ್ಲಿ ಮಕ್ಕಳಿಗಾಗಿ ಪರಿತಪಿಸುವ ಅದೆಷ್ಟೋ ಜನ ಇದ್ದಾರೆ. ಅಂಥದ್ದರಲ್ಲಿ ಇರುವ ಮಕ್ಕಳನ್ನು ಈ ತರಹ ಅಮಾನವೀಯವಾಗಿ ಯಾರದೋ ಮೇಲಿನ ಸಿಟ್ಟಿಗಾಗಿ ಬಲಿ ಕೊಡುವುದು ಎಷ್ಟು ಸರಿ? ಅದಕ್ಕೆ ಹೇಳುವುದು ತೀರಾ ರೇಜಿಗೆ ಹುಟ್ಟಿಸಿದ, ಬೇಸರ ಮೂಡಿಸಿದ ಆ ಕ್ಷಣ ದುಡುಕಿನಲ್ಲಿ ಆತರ ನಿರ್ಧಾರ ತೆಗೆದುಕೊಳ್ಳುವುದು ಅಪಾಯಕಾರಿ...


ಡಾ. ಆನಂದ ಪಾಂಡುರಂಗಿ

ಖ್ಯಾತ ಮನೋವೈದ್ಯರು

No comments:

Post a Comment

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು