Wednesday, June 11, 2025

 ಕಥೆ-751

ದುಡಿಮೆಯ ಬೆಲೆ


ಒಂದು ಊರಿನಲ್ಲಿ ಒಬ್ಬ ನೇಕಾರನಿದ್ದ. ಶಾಂತ ಸ್ವಭಾವದ ಮನುಷ್ಯ, ನಿಗರ್ವಿ, ತುಂಬ ಪ್ರಾಮಾಣಿಕ. ಆತ ಸಿಟ್ಟಾಗಿದ್ದನ್ನು ಆ ಊರಿನಲ್ಲಿ ಯಾರೂ ನೋಡೇ ಇರಲಿಲ್ಲ.ಆ ಊರಿನ ಕೆಲ ಯುವಕರಿಗೆ ಒಂದು ತರಲೆ ಹೊಳೆಯಿತು. ನೇಕಾರನಿಗೆ ಸಿಟ್ಟು ಬರಿಸಬೇಕು ಎಂದು ಅವರು ಮಾತಾಡಿಕೊಂಡರು. ಒಂದು ದಿನ ಯುವಕರ ಗುಂಪು ನೇಕಾರನ ಅಂಗಡಿಗೆ ಆಗಮಿಸಿತು. ಆ ಯುವಕರ ನಾಯಕ ಶ್ರೀಮಂತ ವ್ಯಾಪಾರಿಯೊಬ್ಬನ ಮಗನಾಗಿದ್ದ. ಅವನು ನೇಕಾರನ ಅಂಗಡಿಯಲ್ಲಿ ಒಂದು ಬೆಲೆ ಬಾಳುವ ಸೀರೆಯನ್ನು ಆಯ್ಕೆ ಮಾಡಿ ಅದರ ಬೆಲೆ ವಿಚಾರಿಸಿದ. ನೇಕಾರ ಆ ಸೀರೆಗೆ 10 ನಾಣ್ಯಗಳ ಬೆಲೆ ಕಟ್ಟಿದ. ನೇಕಾರನನ್ನು ಛೇಡಿಸುವ ಉದ್ದೇಶದಿಂದ ಆ ಶ್ರೀಮಂತ ಯುವಕ, ನನಗೆ ಪೂರ್ಣ ಸೀರೆ ಬೇಡ, ಅರ್ಧ ಸಾಕು ಎನ್ನುತ್ತ ಸೀರೆಯನ್ನು ಹರಿದು ಎರಡು ಭಾಗ ಮಾಡಿ, ಒಂದು ಭಾಗದ ಬೆಲೆ ವಿಚಾರಿಸಿದ. ನೇಕಾರ ಶಾಂತ ಚಿತ್ತದಿಂದ ಆ ಅರ್ಧ ಸೀರೆಯ ಬೆಲೆ 5 ನಾಣ್ಯಗಳು ಎಂದು ಉತ್ತರಿಸಿದ. ಯುವಕ ಮತ್ತೆ ಆ ಸೀರೆಯನ್ನು ಎರಡು ಭಾಗ ಮಾಡಿ, ಒಂದು ಭಾಗ ಸಾಕು ಅದರ ಬೆಲೆ ಹೇಳು ಎಂದು ನೇಕಾರನನ್ನು ಕೆಣಕಿದ. ನೇಕಾರ ಕೊಂಚವೂ ವಿಚಲಿತನಾಗದೇ ಸೀರೆಯ ಬೆಲೆ ಎರಡು ನಾಣ್ಯಗಳು ಎಂದು ಉತ್ತರಿಸಿದ. ಹೀಗೇ ಆ ಯುವಕ ಸೀರೆಯನ್ನು ತುಂಡು ಮಾಡುತ್ತಲೇ ಹೋದ. ಕೊನೆಗೆ “ ಈ ಸೀರೆ ನನಗೀಗ ಯಾವ ಉಪಯೋಗಕ್ಕೂ ಬಾರದು" ಎಂದು ಕೈಚೆಲ್ಲಿದ. ಆಗ ನೇಕಾರ " ಹುಡುಗಾ ಈಗ ಈ ಸೀರೆ ನಿನಗಷ್ಟೇ ಅಲ್ಲ ಯಾರ ಉಪಯೋಗಕ್ಕೂ ಬಾರದು" ಎಂದು ಶಾಂತಚಿತ್ತದಿಂದ ಮಾತನಾಡಿದ. ಇಷ್ಟಾದರೂ ನೇಕಾರ ಸಿಟ್ಟಿಗೇಳದ್ದನ್ನು ಕಂಡು ಆ ಯುವಕನಿಗೆ ನಾಚಿಕೆಯಾಯಿತು. "ಕ್ಷಮಿಸಿ, ನನ್ನಿಂದಾಗಿ ನಿಮಗೆ ನಷ್ಟವಾಯಿತು, ದಯವಿಟ್ಟು ಸೀರೆಯ ಪೂರ್ತಿ ಬೆಲೆಯನ್ನು ನನ್ನಿಂದ ಸ್ವೀಕರಿಸಿ” ಎಂದು ಮನವಿ ಮಾಡಿಕೊಂಡ. ನೀನು ನನ್ನಿಂದ ಸೀರೆ, ಕೊಂಡಿಲ್ಲ, ಆದ್ದರಿಂದ ನಿನ್ನಿಂದ ನಾನು ಹಣ ಪಡೆಯಲಾರೆ ಎಂದು ನೇಕಾರ ಹಣ ಸ್ವೀಕರಿಸಲು ನಿರಾಕರಿಸಿದ. ನೇಕಾರನ ಈ ಮಾತು ಕೇಳುತ್ತಲೆ ಆ ಯುವಕನ 

ಅಹಂಗೆ ಪೆಟ್ಟು ಬಿದ್ದಿತು.

ಕೃಪೆ :ಬದುಕಲು ಕಲಿಯಿರಿ

No comments:

Post a Comment

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು