ಕಥೆ-1059
ಭಾರತದ "ಕ್ಷೀರ ಕ್ರಾಂತಿ'
ಭಾರತದ "ಕ್ಷೀರ ಕ್ರಾಂತಿಯ ಪಿತಾಮಹ" ವರ್ಗೀಸ್ ಕುರಿಯನ್ ರವರ ಅನನ್ಯ ಕೊಡುಗೆಯ ಪರಿಣಾಮವಾಗಿ ಇಂದು ನಮ್ಮ ದೇಶವು ಜಾಗತಿಕವಾಗಿ ಶೇ 25 ರಷ್ಟು ಹಾಲು ಉತ್ಪಾದಿಸುವ ದೇಶವಾಗಿ ಮೊದಲ ಸ್ಥಾನ ಹೊಂದಲು ಸಾಧ್ಯವಾಗಿದೆ.
ಕುರಿಯನ್ ರವರು ಹುಟ್ಟಿದ್ದು ಕೇರಳದ ಕೋಝಿಕೋಡ್ (ಅಂದರೆ ಕ್ಯಾಲಿಕಟ್) ನಲ್ಲಿ. ಭೌತಶಾಸ್ತ್ರದಲ್ಲಿ ಪದವಿಯ ನಂತರ B.E. ( ಮೆಕ್ಯಾನಿಕಲ್ ಇಂಜಿನಿಯರಿಂಗ್) ಮಾಡಿದರು. ಬಳಿಕ ಜಮ್ ಷೆಡ್ ಪುರದ ಟಾಟಾ ಸ್ಟೀಲ್ ತಾಂತ್ರಿಕ ಸಂಸ್ಥೆಯಲ್ಲಿ ಅಧ್ಯಯನ ಮಾಡಿ ಮೆಟಲರ್ಜಿಕಲ್ ಇಂಜಿನಿಯರಿಂಗ್ ನಲ್ಲಿ ಎಂ.ಎಸ್ಸಿ. ಮಾಡಲು ಸ್ಕಾಲರ್ಶಿಪ್ ಪಡೆದುಕೊಂಡು ಅಮೇರಿಕಕ್ಕೆ ತೆರಳಿದರು.
ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ (GCMMF)ದ ಸಂಸ್ಥಾಪಕ ಅಧ್ಯಕ್ಷರಾಗಿ, ಕುರಿಯನ್ ಅವರು ಅಮುಲ್ ಡೈರಿ ಉತ್ಪನ್ನಗಳ ಬ್ರಾಂಡ್ ನ ಸೃಷ್ಟಿ ಮತ್ತು ಯಶಸ್ಸಿಗೆ ಕಾರಣರಾದರು.
ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದಲ್ಲಿ ಅವರ ಸಾಧನೆ ಕಂಡು ರಾಷ್ಟ್ರೀಯ ಮಟ್ಟದಲ್ಲಿ ನ ಅಮುಲ್ ಯಶಸ್ಸನ್ನು ಪುನರಾವರ್ತಿಸಲು, 1965 ರಲ್ಲಿ ಅವರನ್ನು ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ(NDDB) ಯ ಸ್ಥಾಪಕ ಅಧ್ಯಕ್ಷರನ್ನಾಗಿ ನೇಮಿಸಿದರು. ಕೆಲವು ವರ್ಷಗಳ ನಂತರ, ಕುರಿಯನ್ ರ ಮುಂದಾಳುತನದಲ್ಲಿ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯು ಆಪರೇಷನ್ ಫ್ಲಡ್ (ಅಥವಾ ವೈಟ್ ರೆವಲ್ಯೂಷನ್-ಕ್ಷೀರಕ್ರಾಂತಿ ) ಎಂಬ ಜಗತ್ತಿನ ಅತಿ ದೊಡ್ಡ ಡೈರಿ ಅಭಿವೃದ್ಧಿ ಯೋಜನೆಯನ್ನು ಪ್ರಾರಂಭಿಸಿತು.
ಆಪರೇಷನ್ ಫ್ಲಡ್ ಯೋಜನೆಯು ಭಾರತವನ್ನು ವಿಶ್ವದ ಅತ್ಯಂತ ದೊಡ್ಡ ಹಾಲು ಉತ್ಪಾದಕ ದೇಶವನ್ನಾಗಿ ಮಾಡಿತು.
"ಭಾರತದ ಹಾಲು ವಿತರಕ" ಮತ್ತು "ಕ್ಷೀರ ಕ್ರಾಂತಿಯ ಪಿತಾಮಹ" ಎಂದು ಬಣ್ಣಿಸಲ್ಪಟ್ಟ ಕುರಿಯನ್ ರವರು ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ '"ಪದ್ಮ ವಿಭೂಷಣ" ಪ್ರಶಸ್ತಿ, ವಿಶ್ವ ಆಹಾರ ಪ್ರಶಸ್ತಿ ಮತ್ತು ಮ್ಯಾಗ್ಸೇಸೆ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಅತ್ಯಂತ ಕುಶಲ ಹಾಗೂ ಶ್ರಮಭರಿತ ದುಡಿಮೆಗೆ ಹೆಸರಾದ ವರ್ಗಿಸ್ ಕುರಿಯನ್ ರವರು ಯಾವುದೇ ಪ್ರತೀಕೂಲ ಪರಿಸ್ಥಿತಿ ಇದ್ದಾಗ್ಯೂ ಒಬ್ಬ ವ್ಯಕ್ತಿ ಇಡೀ ಸಮಾಜಕ್ಕೆ ದೇಶಕ್ಕೆ ದಾರಿ ದೀಪವಾಗಬಹುದು..
No comments:
Post a Comment