Monday, July 8, 2024

 ಕಥೆ-450

ಅಗಲಿಕೆ-ಅನಿವಾರ್ಯ

ಒಂದು ಜಾಲಿಯ ಮರ.

ಅದರ ಮೈತುಂಬ ಮುಳ್ಳು. ಯಾರೂ ಅದರ ಬಳಿ ಸುಳಿಯುತ್ತಿರಲಿಲ್ಲ.

ಒಂಟಿ ಜೀವನ ಮರಕ್ಕೆ ಬೇಸರವಾಯಿತು.

ಯಾರಾದರೂ ಅತಿಥಿಗಳು ಬರಬಹುದು ಎಂದು ದಾರಿ ಕಾಯುತ್ತಿತ್ತು.

ಒಂದು ದಿನ ರಾತ್ರಿ ಒಂದು ಪಕ್ಷಿಯು ಆ ಮರದ ಮೇಲೆ ಬಂದು ಕುಳಿತಿತು.

ಮರಕ್ಕೆ ಹಿಡಿಸಲಾರದಷ್ಟು ಸಂತಸವಾಯಿತು 'ಅತಿಥಿ ದೇವೋಭವ' ಎಂದು ಈ ಪಕ್ಷಿಯನ್ನು ಗೌರವಾದರಗಳಿಂದ ಉಪಚರಿಸಿ ಆಶ್ರಯವನ್ನಿತ್ತಿತು. ಪಕ್ಷಿಯು ಸಂತಸದಿಂದ ರಾತ್ರಿಯನ್ನು ಕಳೆದು ಬೆಳಗಾಗುತ್ತಲೇ ಹೊರಟು ನಿಂತಿತು.

ಮಿತ್ರನೇ, ನೀನು ನನ್ನ ಕೂಡ ಇಲ್ಲಿಯೇ ಇದ್ದು ಬಿಡು ಎಂದು ಮರವು ಪಕ್ಷಿಗೆ ವಿನಂತಿಸಿತು.


ಪಕ್ಷಿ ಹೇಳಿತು - "ದೇವರು ನನಗೆ ಹಾರಲು ಪಕ್ಕಗಳನ್ನು ಕೊಟ್ಟಿದ್ದಾನೆ.

ನಿನಗೆ ಸ್ಥಿರವಾಗಿರಲು ಬೇರನ್ನು ಕೊಟ್ಟಿದ್ದಾನೆ.

ನಾನು ಹಾರುತ್ತಿರಲೇಬೇಕು. ನೀನು ಒಂದು ಕಡೆ ಸ್ಥಿರವಾಗಿರಲೇಬೇಕು.

ಅದುವೇ ಜೀವನದ ರೀತಿ. ಮತ್ತೆ ಎಂದಾದರೂ ಸಮಯ ಸಿಕ್ಕಾಗ ನಾನು ಬರುತ್ತೇನೆ.

ನಿನ್ನ ಉಪಕಾರವನ್ನು ನಾನು ಎಂದೂ ಮರೆಯಲಾರೆ." ಎಂದು ಹೇಳಿ ಪಕ್ಷಿ ಹಾರಿ ಹೋಯಿತು.

ಮರವು ಇನ್ನೂ ಮಿತ್ರನ ದಾರಿ ಕಾಯುತ್ತಲಿದೆ.

ನಾವು ಕೂಡಿದಾಗ ಸುಖಿಸಬೇಕು.

ಅಗಲಿದಾಗ ಕೂಡಿದ ಸುಖವನ್ನು ಸ್ಮರಿಸುತ್ತ ಸಂತಸದಿಂದಿರಬೇಕು.

ಶ್ರೀ ಸಿದ್ಧೇಶ್ವರ ಸ್ವಾಮೀಜಿ,

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು