Saturday, August 9, 2025

 ಕಥೆ-820

ರಕ್ಷಾಬಂಧನ


ರಾಖಿ ಎಂಬುದು ಕೇವಲ ನೂಲಲ್ಲ, ಸಹೋದರ ಸಹೋದರಿ ಸಂಬಂಧಗಳ ಅಭೇದ್ಯ ಅನುಬಂಧ.. 


ಕನಸುಗಳು ನೂರಿರಲಿ, ಸಂರಕ್ಷಣೆ ಹೊಣೆ ನನಗಿರಲಿ ಎಂಬ ಸಂದೇಶ ಸಾರುವ ಸೋದರತೆಯ ಸಂಭ್ರಮದ ಹಬ್ಬ...


ಶ್ರಾವಣ ಮಾಸದ ಶುಕ್ಲ ಪಕ್ಷದ ನೂಲು ಹುಣ್ಣಿಮೆಯ ಈ ದಿನ ರಕ್ಷಾಬಂಧನದ ಸಂಭ್ರಮ.. ಈ ರಕ್ಷಾ ಬಂಧನದ ‘ರಾಖಿ ಹಬ್ಬ’, ‘ಅಣ್ಣ-ತಂಗಿ, ಅಕ್ಕ-ತಮ್ಮರ ಜನುಮ ಜನುಮದ ಅನುಬಂಧ. ಸಹೋದರ ಸಹೋದರಿಯರ ನಡುವಿನ ಬಂಧವನ್ನು ಗಟ್ಟಿಗೊಳಿಸಿ, ತಂಗಿಗೆ ಅಣ್ಣನಾದವನು ನಾನಿದ್ದೇನೆ ನಿನ್ನ ಬೆನ್ನಿಗೆ... ಅಣ್ಣನಿಗೆ ತಂಗಿಯ ಶ್ರೀರಕ್ಷೆ ಮತ್ತು ಶುಭ ಹಾರೈಕೆಯ ಪ್ರತೀಕವಾಗಿದೆ...


 ಸಹೋದರಿಯರು ತಮ್ಮ ಸಹೋದರರಿಗೆ ಒಳ್ಳೆಯದಾಗಲೆಂದು ಹಾರೈಸುತ್ತ ಅವರಿಗೆ ಆರತಿ ಬೆಳಗಿ ಕುಂಕುಮ ಹಚ್ಚಿ ಸಿಹಿ ತಿನ್ನಿಸಿ ಅವರ ಕೈಯ ಮಣಿಕಟ್ಟಿನ ಮೇಲೆ ತಮ್ಮ ಪ್ರೀತಿ ಮತ್ತು ಸ್ನೇಹದ ಸಂಕೇತವಾದ ರಾಖಿಯನ್ನು ಕಟ್ಟಿ ದೀರ್ಘಾಯುಷ್ಯವನ್ನು ಹಾರೈಸಿ ಆಶೀರ್ವಾದ ಪಡೆಯುತ್ತಾರೆ. ಇದಕ್ಕೆ ಪ್ರತಿಯಾಗಿ ಸಹೋದರ ಸಹೋದರಿಯನ್ನು ರಕ್ಷಿಸುವ ಭರವಸೆ ನೀಡುತ್ತಾರೆ. ಅಲ್ಲದೇ ಸಹೋದರರು ತಮ್ಮ ಸಹೋದರಿಯರಿಗೆ ಅವರ ಪ್ರೀತಿಯ ಸಂಕೇತವಾಗಿ ಅವರಿಗಿಷ್ಟವಾದ ಉಡುಗೊರೆಗಳನ್ನು ನೀಡುವುದು ಸಾಮಾನ್ಯವಾಗಿದೆ.  


ರಕ್ಷಾಬಂಧನವು ಸಹೋದರತೆ ಬಾಂಧವ್ಯವನ್ನು ಗಟ್ಟಿಗೊಳಿಸಿ, ಒಡಹುಟ್ಟಿದವರ ನಡುವೆ ಪ್ರೀತಿ ಮತ್ತು ಬೆಂಬಲವನ್ನು ಹೆಚ್ಚಿಸುತ್ತದೆ. ಸಹೋದರಿಯರು ತಮ್ಮ ಸಹೋದರರ ಸಮೃದ್ಧಿ ಮತ್ತು ಸಂತೋಷಕ್ಕಾಗಿ ಪ್ರಾರ್ಥಿಸಿದರೆ ಸಹೋದರರು ಸಹೋದರಿಯರನ್ನು ರಕ್ಷಿಸುವ ಪ್ರತಿಜ್ಞೆ ಮಾಡುತ್ತಾರೆ. ರಕ್ಷಾಬಂಧನ ಯುಗಯುಗಾಂತರಗಳಿಂದ ಬಂದಿರುವ ಒಂದು ಸಾಂಪ್ರದಾಯಿಕ ಹಬ್ಬ... ಇದು ಕುಟುಂಬದ ನಡುವೆ ಪ್ರೀತಿ, ಒಗ್ಗಟ್ಟು ಮತ್ತು ಸಾಮರಸ್ಯವನ್ನು ಮೂಡಿಸುತ್ತದೆ..

ರಕ್ಷಾಬಂಧನದ ಶುಭಾಶಯಗಳು

- ಶಂಕರಗೌಡ ಬಸಾಪುರ

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು